ಪುತ್ತೂರು:- ಬ್ಲಾಕ್ ಕಾಂಗ್ರೆಸ್ ಪುತ್ತೂರು ಇದರ ವತಿಯಿಂದ ಜೂನ್ 21 ಶನಿವಾರ ದಿವಸ ಬೆಳಿಗ್ಗೆ 10:30 ಕ್ಕೆ ಹಿಂದುಳಿದ ವರ್ಗಗಳ ಘಟಕದ ಸಭೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಸಂಯೋಜಕ ಹೇಮನಾಥ್ ಶೆಟ್ಟಿ, ಕಾವು ಹಾಗೂ ಪಕ್ಷದ ವಿವಿಧ ನಾಯಕರುಗಳು ಭಾಗವಹಿಸಲಿದ್ದಾರೆ.
ಇದರ ಜೊತೆಯಲ್ಲಿ ಪಕ್ಷದ ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಹಿಂದುಳಿದ ವರ್ಗಗಳ ಪುತ್ತೂರು ಬ್ಲಾಕ್ ಘಟಕದ ಅಧ್ಯಕ್ಷರಾದ ಶ್ರೀ ಮೋನಪ್ಪ ಪೂಜಾರಿ ಕೆರೆಮಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ