ಮುಸ್ಲಿಮರ ಅರ್ಜಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯ ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಇವರನ್ನು ಕಾಂಗ್ರೆಸ್ ಸರಕಾರ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹ
ವಿಟ್ಲ:- ಮುಸ್ಲಿಂ ಸಮುದಾಯದ ಅರ್ಜಿಗೆ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ ಎನ್ನುವ ನಿಟ್ಟಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯ ಬೆದರಿಕೆ ಹಾಕಿದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಸರಕಾರಿ ಅಧಿಕಾರಿಗಳಿಗೆ ಗೌರವ ನೀಡುವ ಕೆಲಸವನ್ನು ರಾಜ್ಯ ಸರಕಾರ ಮಾಡಿದರೆ ಇದಕ್ಕೆ ಬೆಲೆ ಮತ್ತು ಮೌಲ್ಯ ಬರ್ತದೆ ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಸರಕಾರವನ್ನು ಆಗ್ರಹಿಸಿದ್ದಾರೆ
ಕಾಂಗ್ರೆಸ್ ಪಕ್ಷದ ಪರಮೋಚ್ಚ ನಾಯಕ ಶ್ರೀ ರಾಹುಲ್ ಗಾಂಧಿಯವರು ಹೇಳಿದ ರೀತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಇರುವ ಬಿಜೆಪಿ ಮನಸ್ಥಿತಿಯವರನ್ನು ಹೊರಗೆ ಹಾಕಬೇಕು ಈ ಸಂದೇಶ ನೇರವಾಗಿ ಈ ಶಾಸಕನನ್ನು ವಜಾ ಮಾಡುವ ಮೂಲಕ ಈ ಆರಂಭ ಕರ್ನಾಟಕದಿಂದಲೇ ಆರಂಭವಾಗಲಿ ಎಂದು ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಪತ್ತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ