ಪುತ್ತೂರು ಕೂರತ್ ತಂಙಳ್ ಎಂದೇ ಪ್ರಸಿದ್ದರಾಗಿದ್ದ ಖುರ್ರತುಸ್ಸಾದಾತ್ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ಹೆಸರಿನಲ್ಲಿ ಉರೂಸ್ ಮುಬಾರಕ್ ಜೂ 26 ರಿಂದ 29 ರ ತನಕ ಪುತ್ತೂರು ಕೂರತ್ ಫಝಲ್ ನಗರದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಮತ್ತು ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಉಳ್ಳಾಲ ಸಹಿತ ನೂರಾರು ಮೊಹಲ್ಲಾಗಳ ಖಾಝಿಗಳಾಗಿ ಸೇವೆ ಸಲ್ಲಿಸಿದ ತಂಙಳ್ ಅವರ ಪ್ರಥಮ ಅನುಸ್ಮರಣಾ ಉರೂಸ್ ಕಾರ್ಯಕ್ರಮ ಇದಾಗಿದ್ದು ಕೇರಳ ಮತ್ತು ಕರ್ನಾಟಕದ ಸಾವಿರಾರು ಜನರು ಭಾಗವಹಿಸಲಿದ್ದಾರೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿದ್ವಾಂಸರು ಗಣ್ಯರು ಪಾಲ್ಗೊಳ್ಳುವವರು
ಜೂ 26 ರ ಸಂಜೆ ಗಂಟೆ 4:30 ಕ್ಕೆ ಉರೂಸ್ ಸಮಿತಿಯ ಚೇರ್ ಮೇನ್, ಅಸಯ್ಯದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ನೇತ್ರತ್ವದಲ್ಲಿ ಮಖಾಂ ಝಿಯಾರತ್ ನೊಂದಿಗೆ ಉರೂಸ್ ಸಮಾರಂಭಕ್ಕೆ ಚಾಲನೆ ದೊರಕಲಿದೆ ಸಂಜೆ ಗಂಟೆ 5:30 ಕ್ಕೆ ಕರ್ನಾಟಕ ಸುನ್ನಿ ಉಲೆಮಾ ಒಕ್ಕೂಟದ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲೆಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಅಸಯ್ಯದ್ ಅಬ್ದುಲ್ ರಹ್ಮಾನ್ ಸಾದತ್ ತಂಙಳ್ ಬಾಅಲವಿ ಉಲ್ಲೂರು ಅಧ್ಯಕ್ಷತೆ ವಹಿಸಲಿದ್ದಾರೆ ಮರ್ಕಝ್ ನಾಲೆಜ್ ಸಿಟಿ ಡೈರಕ್ಟರ್ ಡಾ.ಎ.ಪಿ.ಅಬ್ದುಲ್ ಹಕೀಂ ಅಝಹರಿ ಮುಖ್ಯ ಭಾಷಣ ಮಾಡಲಿದ್ದಾರೆ
ಜೂನ್ 27 ರಂದು ಅಪರಾಹ್ನ 2 ಗಂಟೆಗೆ ರಾತೀಬ್ ನಡೆಯಲಿದ್ದು ಸಂಜೆ 4 ಗಂಟೆಗೆ ಬುರ್ಧಾ ಮಜ್ಲಿಸ್ ನಡೆಯಲಿದೆ ಬಳಿಕ ಅಹ್ಲು ಅಬಾಲ್ ಮೌಲಿದ್ ನಡೆಯಲಿದೆ
ರಾತ್ರಿ ಗಂಟೆ 8 ಕ್ಕೆ ನಡೆಯುವ ನೂರೇ ಫಝಲ್ ಕಾನ್ಪರೆಸ್ಸನ್ನು ಇಂಡಿಯನ್ ಗ್ರ್ಯಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ.
ಜೂನ್ 28 ಕ್ಕೆ ಬೆಳಿಗ್ಗೆ ಗಂಟೆ 5:30 ಕ್ಕೆ ಮಂಕೂಸ್ ಮೌಲಿದ್ ಬೆಳಿಗ್ಗೆ 9 ಗಂಟೆಗೆ ತಾಜುಲ್ ಉಲೆಮಾ ಮೌಲಿದ್ ಬೆಳಿಗ್ಗೆ 10:30 ಕ್ಕೆ ರಿಪಾಯಿ ರಾತೀಬ್ ಮಜ್ಲಿಸ್ ಅಪರಾಹ್ನ 2 ಗಂಟೆಗೆ ಮೊಹಲ್ಲಾ ಸಂಗಮ ನಡೆಯಲಿದೆ.
ಸಂಜೆ 4:30.,ಕ್ಕೆ ನಡೆಯುವ ಸಾಮಾಜಿಕ ಕಾರ್ಯಕ್ರಮವನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.
ಡಾ.ಯುಟಿ ಇಫ್ತಿಕಾರ್ ಅಧ್ಯಕ್ಷತೆ ವಹಿಸುವವರು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂಸದ ಕ್ಯಾ ಬಿಜೇಶ್ ಚೌಟ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಢಾರಿ ಐವನ್ ಡಿಸೋಜ, ಮಾಜಿ ಸಚಿವರಾದ ಬಿ ರಮನಾಥ್ ರೈ, ಇಕ್ಬಾಲ್ ಅನ್ಸಾರಿ ವಿನಯಕುಮಾರ್ ಸೊರಕೆ ಭಾಗವಹಿಸಲಿದ್ದಾರೆ.
ಸಂಜೆ 7 ಗಂಟೆಗೆ ನಡೆಯುವ ಉರೂಸ್ ಸಮಾರೋಪ ಸಮಾರಂಭವನ್ನು ರಹಿಸುಲ್ ಉಲಮಾ ಇ ಸುಲೈಮಾನ್ ಉಸ್ತಾದ್ ಉದ್ಘಾಟಿಸಲಿದ್ದಾರೆ ಹಲವಾರು ಧಾರ್ಮಿಕ ಸಾಮಾಜಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ
ಜೂ 29 ರಂದು ಬೆಳಿಗ್ಗೆ ಗಂಟೆ 8:30 ಕ್ಕೆ ಖಮ್ಮುಲ್ ಖರ್ ಆನ್ ಸಮರ್ಪಣೆ ಹಾಗೂ ಬದ್ ಮೌಲಿದ್ ನಡೆಯಲಿದ್ದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ನಡೆಯುವ ಮಹಾ ಅನ್ನದಾನದೊಂದಿಗೆ ಉರೂಸ್ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ಉರೂಸ್ ಕಮಿಟಿಯ ಅಧ್ಯಕ್ಷರು ಪದಾಧಿಕಾರಿಗಳು ತಿಳಿಸಿದ್ದಾರೆ