ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮತ್ತು ಇಡ್ಕಿದು-ಕುಳ, ವಿಟ್ಲ ಮುಡ್ನೂರು, ವಿಟ್ಲ ನಗರ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.30 ಸೋಮವಾರದಂದು ಈ ಕೆಳಗಿನಂತೆ ನಡೆಯಲಿವೆ
1.ಬೆಳಿಗ್ಗೆ 10.00 ಇಡ್ಕಿದು-ಕುಳ ವಲಯ ಕಾಂಗ್ರೆಸ್ ಆಶ್ರಯದಲ್ಲಿ ಉರಿಮಜಲು ಜಂಕ್ಷನ್ ಬಳಿ,
2.ಮಧ್ಯಾಹ್ನ 12.00 ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಕುಂಡಡ್ಕ ಶೇಡ್ಡ್ ಬಳಿ.
ಸಂಜೆ 3.00 ಗಂಟೆಗೆ ವಿಟ್ಲ ನಗರ ಕಾಂಗ್ರೆಸ್ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ಬಳಿ.
ಈ ಸಭೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ರಮನಾಥ ರೈ, ಶಾಸಕರಾದ ಐವನ್ ಡಿಸೋಜ,ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಯಾದ ಪದ್ಮರಾಜ್ ಮತ್ತು ರಾಜ್ಯ ವಕ್ತಾರ ಎಂ ಜೆ ಹೆಗ್ಡೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷರಾದ ಸುಭಾಷ್ ಶೆಟ್ಟಿ ಕೊಳ್ನಾಡು ಸೇರಿದಂತೆ ಜಿಲ್ಲೆಯ ಹಲವು ಮಂದಿ ನಾಯಕರು ಭಾಗವಹಿಸಲಿದ್ದಾರೆ. ಇದಲ್ಲದೆ ಜಿಲ್ಲೆಯ ಪ್ರಮುಖ ವಾಗ್ಮಿಗಳು ಭಾಗವಹಿಸಿ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಬಿಜೆಪಿ ಹರಡುತ್ತಿರುವ ಸುಳ್ಳಿನ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಆದ್ದರಿಂದ ಇಡ್ಕಿದು-ಕುಳ,ವಿಟ್ಲ ಮುಡ್ನೂರು, ವಿಟ್ಲ ನಗರ ಗ್ರಾಮದ ಮತದಾರ ಬಂಧುಗಳು, ಕಾಂಗ್ರೆಸ್ ಕಾರ್ಯಕರ್ತರು,ಜನ ನಾಯಕರುಗಳು ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.