
ಬಂಟ್ವಾಳ:- ಪುರಸಭಾ ಸದಸ್ಯ, ದಲಿತ ಮುಖಂಡ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ನಿವಾಸಿ ಜನಾರ್ದನ ಚೆಂಡ್ತಿಮಾರ್ ಅವರು ಇಂದು ಬೆಳಿಗ್ಗೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು



ಮಾಜಿ ಸಚಿವ ಬಿ ರಮನಾಥ್ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಇವರು ಇತ್ತೀಚಿನ ಕೆಲ ಸಮಯಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು ರಾಜಕೀಯ ಸಾಮಾಜಿಕ ಚಟುವಟಿಕೆಗಳಿಂದ ದೂರವಿದ್ದರು
ಮೃತರು ಪತ್ನಿ ಒರ್ವ ಪುತ್ರ ಸಹಿತ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮನಾಥ್ ರೈ, ಪುರಸಭಾ ಅಧ್ಯಕ್ಷ ವಾಸು ಪೂಜಾರಿ , ಸಹಿತ ಪುರಸಭಾ ಸದಸ್ಯರುಗಳು ಹಾಗೂ ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ