ಮಂಗಳೂರಿನ ಪ್ರತಿಷ್ಟಿತ ಉದ್ಯಮಿಗೆ ಒಲಿದ ಪ್ರಶಸ್ತಿ
ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕೊಡಮಾಡುವ 2025-26 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ಸೌದಿ ಅರೇಬಿಯಾ ಜುಬೈಲ್ ನ ಅಲ್ ಮುಝೈನ್ ಕಂಪೆನಿ ಸಂಸ್ಥಾಪಕ ಹಾಗೂ ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಅವರು ಅನಿವಾಸಿ ಕನ್ನಡಿಗ ವಿಭಾಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಬಜ್ಪೆಗುತ್ತು ಹಾಜಿ ಬಿ.ಶೇಕುಂಞಿ ಹಾಗೂ ಕತೀಜಮ್ಮ ದಂಪತಿ ಪುತ್ರನಾಗಿರುವ ಝಕರಿಯಾ ಜೋಕಟ್ಟೆ 1958 ಮೇ 10 ರಂದು ಜೋಕಟ್ಟೆಯ ತೋಕೂರಿನಲ್ಲಿ ಜನಿಸಿದರು
5 ಮಕ್ಕಳಲ್ಲಿ ಹಿರಿಯರಾದ ಝಕರಿಯಾ ಪ್ರೌಢ ವಿದ್ಯಾಬ್ಯಾಸವನ್ನು ಮೊಟಕುಗೊಳಿಸಿ ಕಠಿಣ ಕೆಲಸ ಮಾಡಿ ಜೀವನ ಪ್ರಾರಂಭಿಸಿದರು
ಬೀದಿ ಬೀದಿಗಳಲ್ಲಿ ಬೆಲ್ಲ ವ್ಯಾಪಾರ ವೆಲ್ಡಿಂಗ್ ಕೆಲಸ ಗೋಣಿ ಹೂರುವ ಕಾರ್ಮಿಕನಾಗಿ ವಿದೇಶದಲ್ಲಿ 28ನೇ ಮಹಡಿಗೆ ಸಿಮೆಂಟು ಹೊತ್ತು ಶ್ರಮಪಟ್ಟು ದುಡಿದಿದ್ದಾರೆ.
ಹಲವಾರು ವರ್ಷಗಳ ಅವರ ಕಠಿಣ ಪರಿಶ್ರಮ ತ್ಯಾಗ ಹಾಗೂ ಆನುಭವದ ಫಲವಾಗಿ 2008 ರಲ್ಲಿ ಮೂವರು ಕೆಲಸಗಾರರನ್ನು ಇಟ್ಟುಕೊಂಡು ಹಿರಿಯ ಪುತ್ರ ಝಹೀರ್ ರನ್ನೂ ಸೇರಿಸಿಕೊಂಡು ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಅಲ್ ಮುಝೈನ್ ಮೇನ್ ಪವರ್ ಕಂಪೆನಿಯನ್ನು ಸ್ಥಾಪಿಸಿದರು
ಅವಿರತ ದುಡಿಮೆಯಿಂದ ಹಂತ ಹಂತವಾಗಿ ಬೆಳೆದ ಅಲ್ ಮುಝೈನ್ ಕಂಪೆನಿಯಲ್ಲಿ ಪ್ರಸ್ತುತ 8 ಸಾವಿರ ಉದ್ಯೋಗಿಗಳಿದ್ದು 2027 ಕ್ಕೆ 10 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ ಅಲ್ ಮುಝೈನ್ ಬಳಿಕ ಹತ್ತಾರು ಬೇರೆ ಬೇರೆ ಕಂಪೆನಿಗಳನ್ನು ಸ್ಥಾಪಿಸಿದ ಝಕರಿಯಾ ಅವರು ಸೌದಿ ಅರೇಬಿಯಾ ಅಲ್ಲದೇ ಬಹರೈನ್, ಯುಎಇ, ಒಮಾನ್, ಕತಾರ್ ,ಕುವೈಟ್, ಲಂಡನ್, ಹಾಗೂ ಭಾರತಕ್ಕೆ ತಮ್ಮ ಉದ್ಯಮವನ್ನು ವಿಸ್ತರಿಸಿದ್ದಾರೆ
ಶಿಕ್ಷಣ ಸಂಸ್ಥೆಗೂ ಕೈಯಾಡಿಸಿರುವ ಅವರು ಅಲ್ ಕೋಬರ್ ನಲ್ಲಿ ಯನಪೋಯ ಸಹಯೋಗದೊಂದಿಗೆ ಅಂತರಾಷ್ಟ್ರ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿದ್ದು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಹೊಂದುವುದು ಮುಂದಿನ ಯೋಜನೆಯಾಗಿದೆ ಏಐ ಇನ್ನೋವೇಶನ್ ಯೋಜನೆ ಕರಾವಳಿ ಅಭಿವೃದ್ಧಿ ಗುರಿಯನ್ನೂ ಹೊಂದಿದ್ದಾರೆ



