Author: PrasakthaNews

Kannada news website from coastal Karnataka

ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿಕೆ ಬೆಂಗಳೂರು:- ಅ.12 ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತದ ತಾಲಿಬಾನ್ ಇದ್ದಂತೆ ಲಾಠಿ ತಲ್ವಾರ್ ತಿರುಗಿಸಿಕೊಂಡು ತಿರುಗಾಡುತ್ತಿದ್ದಾರೆ. ಹೀಗಾಗಿ ತಮಿಳುನಾಡು ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸರಕಾರ ಜಾಗಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಸರಕಾರದ ಅನುಮತಿ ಪಡೆಯಬೇಕು ಆದರೆ ಆರೆಸ್ಸೆಸ್ ನವರು ಶಾಖೆಗಳನ್ನು ನಡೆಸುತ್ತಿದ್ದು ನಾವೇಕೆ ಅನುಮತಿ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸುತ್ತಾರೆ. ಆರೆಸ್ಸೆಸ್ ನೋಂದಣಿಯಾಗದ ಸಂಘಟನೆಯಾಗಿದೆ ಎಂದು ಟೀಕಿಸಿದರು. ಆರೆಸ್ಸೆಸ್ ನೋಂದಣಿಯಾಗಿದ್ದರೆ ತೋರಿಸಬೇಕು ಫೆಲೆಸ್ತೀನ್ ಪರ ಪ್ರತಿಭಟನೆ ಮಾಡಿದರೆ ಪೋಲಿಸರು ಅವರನ್ನು ಬಂಧಿಸುತ್ತಾರೆ ಹೀಗಿರುವಾಗ ಆರೆಸ್ಸೆಸ್ ಶಾಖೆಗಳನ್ನು ನಡೆಸಲು ಪೋಲಿಸರು ಏಕೆ ಅವಕಾಶ ನೀಡುತ್ತಾರೆ. ತಮಿಳುನಾಡಿನಲ್ಲಿ ಶಾಲೆ- ಕಾಲೇಜುಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಸಿದ್ದಕ್ಕೆ ಕಾನೂನು ಕ್ರಮ ಜರುಗಿಸಿದ್ದಾರೆ ಎಂದು ಹರಿಪ್ರಸಾದ್ ತಿಳಿಸಿದರು. ಸರಕಾರಿ ಆಟದ…

Read More

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿಕೆ ಶಿವಮೊಗ್ಗ:- ರಾಜ್ಯದ ಕನ್ನಡ ಮಾಧ್ಯಮ ಅನುದಾನಿತ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರನ್ನು ನೇಮಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಶನಿವಾರ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು ಈ ಅತಿಥಿ ಶಿಕ್ಷಕರಿಗೆ ಸರ್ಕಾರದಿಂದಲೇ ಗೌರವಧನ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬಲಪಡಿಸುವ ಉದ್ದೇಶದಿಂದ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು ‌ ಅನುದಾನಿತ ಶಾಲೆಗಳಲ್ಲಿನ 6000 ಮತ್ತು ಸರ್ಕಾರಿ ಶಾಲೆಗಳಲ್ಲಿನ 12,000 ಸೇರಿದಂತೆ ಒಟ್ಟು 18000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಇದರ ಹೊರತಾಗಿಯೂ ಅನುದಾನಿತ ಶಾಲೆಗಳಲ್ಲಿ ಖಾಲಿ ಉಳಿಯುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗುವುದು. ಅಂದಾಜು 4,000 ದಿಂದ 5,000 ಅತಿಥಿ ಶಿಕ್ಷಕರ…

Read More

ಭವಿಷ್ಯವನ್ನರಸಿ ವಿದೇಶದಲ್ಲಿ ಉನ್ನತ ವ್ಯಾಸಂಗದ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಪುತ್ತೂರು:-ಭವಿಷ್ಯವನ್ನರಸಿ ವಿದೇಶದಲ್ಲಿ ಉನ್ನತ ವ್ಯಾಸಂಗದ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸೇರಿದಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ವಿಸ್ಡಂ ಎಜುಕೇಶನ್ ಸಂಸ್ಥೆಯ ಪುತ್ತೂರು ಶಾಖೆ ವತಿಯಿಂದ INTERNX & ABROAD STUDIES ಬಗ್ಗೆ ಮಾಹಿತಿ ಕಾರ್ಯಗಾರ ಅ.10 ರಂದು ವಿದ್ಯಾರಶ್ಮಿ ಸವಣೂರು ಕಾಲೇಜಿನಲ್ಲಿ ನಡೆಯಿತು. ವಿಸ್ಢಂ ಎಜುಕೇಶನ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯಸ್ಥ ದಿರೇನ್ ಕುಂದರ್, ಪುತ್ತೂರು ಶಾಖೆಯ ಮುಖ್ಯಸ್ಥೆ ರೂಪರೇಖಾ ಆಳ್ವ, ಶಿವಪ್ರಸಾದ್, ಕೌಶಲ್ಯ ಎಸ್, ಉಪ ಪ್ರಾಂಶುಪಾಲರಾದ ಶೇಷಗಿರಿ ಎಂ. ಉಪಸ್ಥಿತರಿದ್ದರು. ವಿಸ್ಡಂ ಎಜುಕೇಶನಲ್ ಸಂಸ್ಥೆಯ ಸಂಸ್ಥಾಪಕಿ ಮ್ಯಾನೇಜಿಂಗ್ ಡೈರೆಕ್ಟರ್ ಡಾ‌.ಪ್ರಾನ್ಸಿಸ್ ತೇಜ್, ಸಹ ಸಂಸ್ಥಾಪಕ ಡಾ.ಗುರುತೇಜ್, ನೇತ್ರತ್ವದಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲಿಚ್ವಿಸುವ ವಿದ್ಯಾರ್ಥಿಗಳಿಗೆ ಕೆರಿಯರ್ ಕೌನ್ಸಿಲಿಂಗ್ ಸ್ಕಾಲರ್ ಶಿಪ್ ಪಾಸಿಬಲಿಟಿ ಗೈಡೆನ್ಸ್ ಡಾಕ್ಯುಮೆಂಟೇಶನ್ ಟೆಸ್ಟ್ ಪ್ರೀಪರೇಶನ್ ಟ್ರೈನಿಂಗ್ IELTS ಟ್ರೈನಿಂಗ್ ನೀಡುವ ಮೂಲಕ ಕಳೆದ ಹಲವು ವರ್ಷಗಳಿಂದ ಮಣಿಪಾಲ, ಶಿವಮೊಗ್ಗ,…

Read More

ರಮೇಶ್ ಕತ್ತಿ ಬಣಕ್ಕೆ ಶಾಕ್ ಬೆಳಗಾವಿ:- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಬಿಜೆಪಿಯ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಚುನಾವಣೆಗಾಗಿ ಒಂದಾದ ಹಿನ್ನಲೆಯಲ್ಲಿ ಜಾರಕಿಹೊಳಿ ಬಣದ 6 ಮಂದಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರೆ. ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ,ಯರಗಟ್ಟಿಯಿಂದ ವಿಶ್ವಾಸ್ ವ್ಯದ್ಯ, ಮೂಡಲಗಿಯಿಂದ ನೀಲಕಂಠ,ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೂಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ,ಆವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಕ್ಟೋಬರ್ 13 ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

Read More

ಅಮಿತ್ ಶಾ ಹೇಳಿಕೆ ಬೆನ್ನಲ್ಲೇ ತೀವ್ರ ಆಕ್ರೋಶ ಹೊರ ಹಾಕಿದ ಮುಸ್ಲಿಂ ಸಂಘಟನೆಗಳು ಹೊಸದಿಲ್ಲಿ:- ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ ಹೆಚ್ಚಳಕ್ಕೆ ಭಾರಿ ಪ್ರಮಾಣದಲ್ಲಿ ಅಕ್ರಮ ವಲಸೆಯೇ ಕಾರಣ ಹೊರತು ಫಲವತ್ತತೆ ದರವಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದೈನಿಕ್ ಜಾಗರಣ್ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಳನುಸುಳುವಿಕೆ ಜನಸಂಖ್ಯಾ ಬದಲಾವಣೆ ಮತ್ತು ಪ್ರಜಾಪ್ರಭುತ್ವ ಕುರಿತು ಉಪನ್ಯಾಸ ನೀಡಿದ ಶಾ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಶೇ.24.6 ದರದಲ್ಲಿ ಹೆಚ್ಚಳವಾಗಿದೆ. ಮತ್ತು ಹಿಂದೂಗಳ ಜನಸಂಖ್ಯೆ ಶೇ.4.5 ರಷ್ಟು ಕುಸಿದಿದೆ ಈ ಕುಸಿತಕ್ಕೆ ಕಾರಣ ನುಸುಳುವಿಕಯೇ ಹೊರತು ಫಲವತ್ತತೆ ದರವಲ್ಲ ಭಾರತವು ವಿಭಜನೆಗೊಂಡಾಗ ಭಾರತದ ಇಕ್ಕೆಲಗಳಲ್ಲಿ ಧರ್ಮದ ಆಧಾರದಲ್ಲಿ ಪಾಕಿಸ್ತಾನ ರಚನೆಯಾಗಿತ್ತು ನಂತರ ಅದು ಪಾಕಿಸ್ತಾನ ಮತ್ತು ಬಾಂಗ್ಲಾದೇಶವಾಗಿ ವಿಭಜನೆಗೊಂಡಿತ್ತು. ಎರಡು ಕಡೆಗಳಿಂದ ಒಳನುಸುಳುವಿಕೆಯು ಜನಸಂಖ್ಯೆಯಲ್ಲಿ ಇಂತಹ ಗಮನಾರ್ಹ ಬದಲಾವಣೆಗೆ ಕಾರಣವಾಗಿದೆ ಎಂದು ಹೇಳಿದರು 1951 ರಿಂದ 2011ರವರೆಗಿನ ಜನಗಣತಿಯಲ್ಲಿ ಎಲ್ಲ ಧರ್ಮಗಳಲ್ಲಿ ಕಂಡು ಬಂದಿದ್ದ ಜನಸಂಖ್ಯಾ…

Read More

ಮಲಯಾಳಂ ನಟ ಜಯಕೃಷ್ಣನ್ ಸಹಿತ ಇಬ್ಬರ ಬಂಧನ ಮಂಗಳೂರು:- ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಅವಹೇಳನಗೈದ ಆರೋಪದ ಮೇರೆಗೆ ಮಲೆಯಾಳಂ ಚಿತ್ರನಟ ಜಯಕೃಷ್ಣನ್ ಸಹಿತ ಇಬ್ಬರನ್ನು ನಗರದ ಉರ್ವ ಠಾಣೆಯ ಪೋಲಿಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅ.9 ರಂದು ರಾತ್ರಿ ಕೇರಳದ ಸಂತೋಷ್ ಅಬ್ರಹಾಂ ಜಯಕೃಷ್ಣನ್ ಮತ್ತು ವಿಮಲ್ ಎಂಬವರು uber ಮತ್ತು Rapido captain ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿ ನಗರದ ಬಿಜೈ ನ್ಯೂರೂಡ್ ನ ಪಿಕ್ ಅಪ್ ವಿಳಾಸ ನೀಡಿದ್ದರು. ಅದರಂತೆ ತಾನು ಕರೆ ಮಾಡಿ ಪಿಕ್ ಅಪ್ ಬಗ್ಗೆ ವಿಚಾರಿಸಿದಾಗ ಆ ಕಡೆಯಿಂದ ಹಿಂದಿ ಭಾಷೆಯಲ್ಲಿ ಮಾತನಾಡಿದ ವ್ಯಕ್ತಿ ಮುಸ್ಲಿಂ ತೀವ್ರವಾದಿ ಟೆರರಿಸ್ಟ್ ಎಂದು ಅವಹೇಳನಗೈದು ಮುಸ್ಲಿಮ್ ಟೆರರಿಸ್ಟ್ ಎಂದು ಹಿಂದಿ ಭಾಷೆಯಲ್ಲಿ ಬೊಬ್ಬೆ ಹಾಕಿದಲ್ಲದೇ ಮಲೆಯಾಳಂನಲ್ಲಿ ತಾಯಿಗೆ ಅವ್ಯಾಚ್ಯವಾಗಿ ಬೈದಿರುವುದಾಗಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ಉರ್ವ ಠಾಣೆಗೆ ದೂರು ನೀಡಿದ್ದರು. ಅದರಂತೆ ಅ.10 ರಂದು ಉರ್ವ ಪೋಲಿಸ್ ಠಾಣೆಯಲ್ಲಿ ಸೆಕ್ಸನ್…

Read More

ನಿಯಮ ಗಾಳಿಗೆ ತೂರಿ ಸಿ ಗ್ರೇಡ್ ಸದಸ್ಯೆ ಯುವತಿಗೆ 7.5 ಕೋಟಿ ರೂ ಸಾಲ ನೀಡಿದ ಸಹಕಾರಿ ಸಂಘ ವಿಟ್ಲ:- ಹೋಬಳಿಯ ಮಾದರಿ ಸಹಕಾರಿ ಸಂಘವೂಂದರಲ್ಲಿ ಚಿನ್ನಾಭರಣ ಅಡಮಾನ ಸಾಲ ನೀಡುವ ಸಂದರ್ಭ ನಿಬಂಧನೆಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿರುವ ಆರೋಪ ಕೇಳಿ ಬಂದಿದ್ದು ಸೊಸೈಟಿಯ ಸದಸ್ಯರೊಬ್ಬರು ಸಹಕಾರ ಇಲಾಖೆಯ ಮೈಸೂರು ಉಪವಿಭಾಗದ ಅಧಿಕಾರಿಗಳಿಗೆ ಹಾಗೂ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿರುವ ಪ್ರತಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಸಮೀಪದಲ್ಲಿರುವ ಸಹಕಾರಿ ಸಂಘದಲ್ಲಿ ಸಿ ಗ್ರೇಡ್ ಸದಸ್ಯತ್ವ ಹೊಂದಿರುವ ಯುವತಿಯೊಬ್ಬರಿಗೆ ನಿಯಮಬಾಹಿರವಾಗಿ 7.5 ಕೋಟಿ ರೂ ಮೊತ್ತದ ಸಾಲವನ್ನು ಕೆಲವು ತಿಂಗಳ ಹಿಂದೆ ನೀಡಲಾಗಿದೆ. ವಾರದಿಂದ ಈ ಪ್ರಕರಣ ಗ್ರಾಮದ ಪ್ರಮುಖರ ಕಿವಿಗೆ ಬಿದ್ದು ಎಲ್ಲಡೆ ಸುದ್ದಿ ಒಡಾಡುತ್ತಿದೆ ಹಲವು ಇಲಾಖೆಗಳಿಗೆ ಈ ಬಗ್ಗೆ ದೂರು ನೀಡಲಾಗಿದೆ ಎನ್ನಲಾಗಿದೆ‌. ಇದರ ಬೆನ್ನಲ್ಲೇ ಜಿಲ್ಲಾ ಸಹಾಯಕ ರಿಜಿಸ್ಟ್ರಾರ್ ಕಚೇರಿಯ ಇಬ್ಬರು ಸಿಬ್ಬಂದಿಗಳು ಹಾಗೂ ಜಿಲ್ಲಾ…

Read More

ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಸಂತೋಷ್ ಲಾಡ್ ಬೆಂಗಳೂರು:- ಡಿಸೆಂಬರ್ ನಲ್ಲಿ ರಾಜಕೀಯ ಕ್ರಾಂತಿಯಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬದಲಾಗುತ್ತಾರೆ ನಿತಿನ್ ಗಡ್ಕರಿ ಹೊಸದಾಗಿ ಪ್ರಧಾನಿಯಾಗುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಪ್ರಧಾನಿಯವರು ತಮ್ಮ ಹುದ್ದೆಯ ಜವಬ್ದಾರಿ ಮರೆತು ನಡೆದುಕೊಳ್ಳುತ್ತಿದ್ದಾರೆ . ವಿದೇಶಗಳಿಗೆ ಹೋದರೆ ಏನೋ ಒಂದು ಮಾತನಾಡುತ್ತಾರೆ.ವಿಧಾನಸಭೆಯ ಚುನಾವಣೆ ಪ್ರಚಾರಕ್ಕೆ ಹೋದಾಗ ಪ್ರಾಸ ಬದ್ದವನ್ನಾಗಿ ಮಾತನಾಡುತ್ತಾರೆ. ಇದು ಪ್ರಧಾನಿ ಅವರ ಕೆಲಸವೇ ಎಂದು ಆಕ್ಷೇಪಿಸಿದರು. ಬಿಜೆಪಿಯಲ್ಲಿನ ಆಂತರಿಕ ಚರ್ಚೆಗಳನ್ನು ನಾನು ಹೇಳುತ್ತಿದ್ದೇನೆ. ಮೋದಿ ಅವರ ವಿರುದ್ಧ ಬಿಜೆಪಿಯ ನಾಯಕರಾಗಲಿ ಮಾಧ್ಯಮದರಾಗಲಿ ಮಾತನಾಡಲು ಅವಕಾಶ ಇಲ್ಲದಂತಹ ವಾತವಾರಣವಿದೆ. ಹೀಗಾಗಿ ಡಿಸೆಂಬರ್ ಒಳಗಾಗಿ ಬದಲಾವಣೆಯಾಗುತ್ತದೆ ಎಂದರು

Read More

ನವೆಂಬರ್ ಕ್ರಾಂತಿಯ ಬಗ್ಗೆ ರಾಜ್ಯದಲ್ಲಿ ಒಡಾಡುತ್ತಿದೆ ಸ್ಪೋಟಕ ಸುದ್ದಿ ಬೆಂಗಳೂರು:- ಅ.10 ನವೆಂಬರ್ ಕ್ರಾಂತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರಿಗೆ ಕರೆದಿರುವ ಔತಣಕೂಟಕ್ಕೂ ನಿಕಟ ಸಂಬಂಧವಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಿಸಿದ್ದಾರೆ. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕಾಂಗ್ರೆಸ್ಸಿನಲ್ಲಿ ದೊಡ್ಡ ಬೆಳವಣಿಗೆ ನಡೆಯುತ್ತಿದೆ ಎಂಬುದು ಜನರ ಅನಿಸಿಕೆಯಾಗಿದೆ. ಸಿಎಂ ಡಿನ್ನರ್ ಮೀಟಿಂಗ್ ಕರೆದಿದ್ದಾರೆ ಕೆಲಸ ಸಚಿವರು ಬೇರೆ ಬೇರೆ ಸಭೆ ನಡೆಸುತ್ತಿದ್ದಾರೆ ಇವೆಲ್ಲ ಕ್ರಾಂತಿಯ ಆಜುಬಾಜು ಓಡಾಡುವ ವಿಚಾರಗಳು ಒಟ್ಟಾರೆ ಹೇಳುವುದಾದರೆ ಡಿನ್ನರ್ ಮೀಟಿಂಗ್ ಎಂದರೆ ಅದೂಂದು ವಿಶೇಷತೆ ಎಂದರು ಇದು ಸಿಎಂ ಸಿದ್ದರಾಮಯ್ಯನವರ ಅಧಿಕಾರದ ಅಂತ್ಯವೇ ಡಿಕೆ ಶಿವಕುಮಾರ್ ಗುಂಪು ಹೇಳುವ ರೀತಿಯಲ್ಲಿ ನವೆಂಬರ್ ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಧಿಕಾರವಧಿ ಪ್ರಾರಂಭವೇ ಎಂದು ಪ್ರಶ್ನಿಸಿದ ಅವರು ದಲಿತರನ್ನು ಮುಖ್ಯಮಂತ್ರಿ ವಿಚಾರದಲ್ಲಿ 75 ಕ್ಕೂ ಹೆಚ್ಚು ವರ್ಷಗಳಿಂದ ವಂಚಿಸಿದ ಕಾಂಗ್ರೆಸ್ ಪಕ್ಷವು ಈಗಲಾದರೂ ದಲಿತ ಸಿಎಂ…

Read More

800 ಮೀ, 1500 ಮೀ.400 ಮೀ.ಹರ್ಡೆಲ್ಸ್ ನಲ್ಲಿ ರಾಜ್ಯ ಮತ್ತು ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪುತ್ತೂರು:- ಜನಸೇವಾ ವಿದ್ಯಾ ಕೇಂದ್ರ ಚನ್ನೇನಹಳ್ಳಿ ಬೆಂಗಳೂರಿನಲ್ಲಿ ನಡೆದ ವಿದ್ಯಾ ಭಾರತಿ ಕರ್ನಾಟಕ ಇದರ ರಾಜ್ಯ ಮತ್ತು ಕ್ಷೇತ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನರೇಂದ್ರ ಪ.ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪಿ.ಯಶಸ್ವಿ ನಾಯಕ್ ಇವರು 800 ಮೀ.1500ಮೀ.400 ಮೀ.ಹರ್ಡೆಲ್ಸ್ ನಲ್ಲಿ ರಾಜ್ಯ ಮತ್ತು ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಹಾಸನದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಪುಣಚ ಗ್ರಾಮದ ಬೈಲುಪದವು ನಿವಾಸಿಯಾದ ಜಿ.ಪರಮೇಶ್ವರ ನಾಯಕ್ , ರೋಹಿನಿ ಎನ್ ಇವರ ಸುಪುತ್ರಿಯಾಗಿರುತ್ತಾರೆ.

Read More