Author: PrasakthaNews

Kannada news website from coastal Karnataka

ಮಹತ್ವದ ಸ್ಥಾನ ಪಡೆದ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ಹರೀಶ್ ಕುಮಾರ್ಬಂಟ್ವಾಳ:-ಮಂಗಳೂರು ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಅವರು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು ಕರಾವಳಿ ಜಿಲ್ಲೆಯಲ್ಲಿ ನಿಗಮ ಮಂಡಳಿಯಲ್ಲಿ ಮಹತ್ವದ ಸ್ಥಾನ ಪಡೆದವರ ಸಾಲಿನಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರು ಮೊದಲ ಸಾಲಿನಲ್ಲಿ ಗುರುತಿಸಿದ್ದಾರೆ

Read More

ಡಿಎನ್ಎ ವರದಿ ಪಾಸಿಟಿವ್ ಬಿಜೆಪಿ ಆರ್ ಎಸ್ ಎಸ್ ಸಂತ್ರಸ್ತೆಗೆ ನ್ಯಾಯ ಒದಗಿಸಲು ಮುಂದಾಗಲಿ ವಿಮೆನ್ ಇಂಡಿಯಾ ಆಗ್ರಹ ಮಂಗಳೂರು:- ಪ್ರೀತಿಸಿ ದೈಹಿಕ ಸಂಪರ್ಕ ಬಳಸಿ ಗರ್ಭಿಣಿಯಾಗಿ ಪ್ರಸವವಾದ ನಂತರ ಮದುವೆಯಾಗಲು ನಿರಾಕರಿಸಿದ ಹಲವು ಗೊಂದಲಕ್ಕೆ ಸಾಕ್ಷಿಯಾಗಿದ್ದ ಪುತ್ತೂರಿನ ಪ್ರಕರಣದಲ್ಲಿ ಡಿಎನ್ಎ ವರದಿ ಆರೋಪಿತನಾಗಿರುವ ಜೆ ಕೃಷ್ಣರಾವ್ ನದೇ ಎಂದು ದೃಢಪಟ್ಟಿರುವುದರಿಂದ ಬಿಜೆಪಿ ಆರ್ ಎಸ್ ಎಸ್ ನಾಯಕರು ತಮ್ಮ ನಾಯಕನ ಪುತ್ರನಿಂದಾದ ತಪ್ಪಿಗೆ ನ್ಯಾಯ ಒದಗಿಸಲು ಮುಂದಡಿ ಇಡಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿನಿರರವರು ತಿಳಿಸಿದ್ದಾರೆ ಬಿಜೆಪಿ ಮುಖಂಡ ಹಾಗೂ ನಗರ ಪಂಚಾಯತ್ ಸದಸ್ಯ ಜಗನ್ನಿಸ್ ರಾವ್ ಅವರ ಪುತ್ರ ಎಬಿವಿಪಿ ಕಾರ್ಯಕರ್ತ ಆರೋಪಿತ ವ್ಯಕ್ತಿ ಜೆ ಕೃಷ್ಣರಾವ್ ಮಗು ತನ್ನದೆಲ್ಲ ಎಂದು ವಾದಿಸುತ್ತಿದ್ದ ಆದರೆ ಡಿಎನ್ಎ ವರದಿಯಿಂದ ಸತ್ಯ ಬಹಿರಂಗವಾಗಿದೆ ಹಾಗಾಗಿ ಇನ್ನು ತಡ ಮಾಡದೆ ಕೂಡಲೇ ಸಂತ್ರಸ್ತೆಯನ್ನು ಮದುವೆಯಾಗುವುದೇ ನ್ಯಾಯವಾಗಿರುವುದರಿಂದ ಆ ನಿಟ್ಟಿನಲ್ಲಿ ಮುಂದಿನ ನಡೆ ಸಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ…

Read More

ಫೈನಲ್ ನಲ್ಲಿ ಪಾಕ್ ಬಗ್ಗು ಬಡಿದು ಟ್ರೋಪಿ ಎತ್ತಿ ಹಿಡಿದ ಟೀಮ್ ಇಂಡಿಯಾದುಬೈ:- ಭಾರತ ತಂಡ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು 2025 ರ ಏಷ್ಯಾಕಪ್ ತನ್ನದಾಗಿಸಿಕೊಂಡಿದೆ.ದುಬೈ ಅಂತರರಾಷ್ಟ್ರೀಯ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 147 ರನ್ ಗಳ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ತಲುಪಿತು ತಿಲಕ್ ವರ್ಮಾ ಅಜೇಯ ಅರ್ಧ ಶತಕದ ಮೂಲಕ ಗೆಲುವಿನ ರೂವಾರಿಯಾದರು ಶಿವಂ ದುಬೆ 22 ಎಸೆತಗಳಲ್ಲಿ 33 ರನ್ ಗಳಿಸಿ ತಿಲಕ್ ವರ್ಮಾ ಅವರಿಗೆ ಸಾಥ್ ನೀಡಿದರು ಪಾಕಿಸ್ತಾನ ನೀಡಿದ 147 ರನ್ ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಇಡೀ ಟೂರ್ನಿಯಲ್ಲಿ ಅನುಭವಿಸಿದಂತಹ ಭಾರಿ ಆಘಾತ ಎದುರಿಸಿತ್ತು ಗೋಲ್ಡನ್ ಫಾರ್ಮನಲ್ಲಿದ್ದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕೇವಲ 6 ಎಸೆತಗಳಲ್ಲಿ 5ರನ್ ಗಳಿಸಿ ಫಹಿಂ ಅಶ್ರಫ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ಔಟ್ ಆದರು ಇಡೀ ಟೂರ್ನಿಯಲ್ಲಿ ಇದು ಅವರ ಸಿಂಗಲ್ ಡಿಜಿಟ್ ವೈಫಲ್ಯವಾಯಿತು…

Read More

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡುವುದಿಲ್ಲ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಣೆ ಬೆಂಗಳೂರು:- ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ ವಿತರಣೆ ಪ್ರಕ್ರಿಯೆ ತಿಂಗಳಲ್ಲಿ ಆರಂಭವಾಗುತ್ತದೆ. ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ ಈಗಾಗಲೇ ರಾಜ್ಯದಲ್ಲಿ 13 ಲಕ್ಷ ಅನರ್ಹ ಕಾರ್ಡುಗಳನ್ನು ಹುಡುಕಿ ಪಟ್ಟಿ ಸಿದ್ದಪಡಿಸಿದ್ದೇವೆ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದರೆ ಮುಂದೆ ಬಂದು ಕಾರ್ಡುಗಳನ್ನು ಎಪಿಎಲ್ ಮಾಡಿಸಬೇಕು ಇದರಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಸಹಾಯವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡುಗಳು ರಾಜ್ಯದಲ್ಲಿವೆ ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ ಅನರ್ಹರನ್ನು ಬಿಪಿಎಲ್ ನಿಂದ ಎಪಿಎಲ್ ಗೆ ಹಾಕ್ತೇವೆ ಎಂದು ತಿಳಿಸಿದ್ದಾರೆ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಹೊಸ ಬಿಪಿಎಲ್ ಕಾರ್ಡ್ ದಾರರಿಗೆ…

Read More

ಕಾಂಗ್ರೆಸ್ ಪಕ್ಷದ ಖ್ಯಾತ ವಾಗ್ಮಿಗೆ ಒಲಿದ ನಿಗಮದ ಅವಕಾಶ ಬೆಂಗಳೂರು:- ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದೆ ನಿಕೇತ್ ರಾಜ್ ಮೌರ್ಯ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ತನ್ನ ಮಾತಿನ ಮೂಲಕ ಎಲ್ಲರನ್ನೂ ಸೆಳೆಯುವ ಕೆಲಸವನ್ನು ಮಾಡಿರುತ್ತಾರೆ ಪ್ರಸಕ್ತವಾಗಿ ನಿಕೇತ್ ರಾಜ್ ಅವರ ಅರ್ಹತೆಯನ್ನು ಗಮನಿಸಿ ಅವರಿಗೆ ಉನ್ನತ ಸ್ಥಾನ ಮಾನ ನೀಡಿ ಗೌರವಿಸಲಾಗಿದೆ

Read More

ಮಂಗಳೂರು:- ಸೆ 17 ರ ಸಭೆಯಲ್ಲಿ ತೀರ್ಮಾನಿಸಿದಂತೆ ಮುಸ್ಲಿಂ ಸಮಾಜದವರು ಧರ್ಮ ಇಸ್ಲಾಂ ಜಾತಿ ಮುಸ್ಲಿಂ ಉಪಜಾತಿ ಬ್ಯಾರಿ ಎಂದು ನಮೋದಿಸಬೇಕೆಂದು ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಕರೆ ನೀಡಿದ್ದಾರೆ. ಸೆ.17 ರಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ ಕೇಂದ್ರ ಜುಮಾ ಮಸೀದಿ ಝೀನತ್ ಭಕ್ಷ್ ಮಂಗಳೂರಿನ ಅಧ್ಯಕ್ಷರಾದ ಡಾ.ಯನಪೋಯ್ ಅಬ್ದುಲ್ಲಾ ಕುಂಙಿ ಹಾಜಿ ಇವರ ನೇತ್ರತ್ವದಲ್ಲಿ ಜಿಲ್ಲಾ ಮಸೀದಿಗಳ ಪಧಾದಿಕಾರಿಗಳು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಮುಸ್ಲಿಂ ಮುಂದಾಳುಗಳ ಸಭೆ ನಡೆಸಲಾಯಿತು. ಇದು ಧರ್ಮಾಧಾರಿತ ಜಾತಿ ಗಣತಿ ಅಲ್ಲ ವೃತ್ತಿ ಆಧಾರಿತ ಜಾತಿ ಗಣತಿ ಎಂದು ಈ ಸಭೆಯಲ್ಲಿ ನಿರ್ಧರಿಸಲಾಗಿದೆ ತೀರ್ಮಾನದ ಪ್ರಕಾರ ಮುಸ್ಲಿಂ ಸಮಾಜದವರು ಧರ್ಮ ಇಸ್ಲಾಂ ಜಾತಿ ಮುಸ್ಲಿಂ ಉಪಜಾತಿ ಬ್ಯಾರಿ ಎಂದು ನಮೂದಿಸಬೇಕೆಂದು ತೀರ್ಮಾನಿಸಲಾಗಿದೆ ಮುಸ್ಲಿಂ ಸಮಾಜದ ಸದಸ್ಯರಿಗೆ ತಮ್ಮ ಮನೆ ಸಂಬಂಧಿತ ಜಾತಿ ವಿವರಗಳನ್ನು ಈ ಪ್ರಕಾರ ಭರ್ತಿ ಮಾಡಿಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯ ಖಾಝಿ ತ್ವಾಕ…

Read More

2025ರ ಏಷ್ಯಾಕಪ್ ಸೂಪರ್ 4 ಹಂತದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 135 ರನ್ ಟಾರ್ಗೆಟ್ ನೀಡಿತ್ತು.ಆದ್ರೆ ಬಾಂಗ್ಲಾದೇಶ ತಂಡ 124 ರನ್ ಗಳಿಸಿ 11 ರನ್ ಅಂತರದಲ್ಲಿ ಒಂದು ವಿಕೆಟ್ ಉಳಿಸಿಕೊಂಡು ಪಾಕ್ ವಿರುದ್ಧ ಸೋಲೊಪ್ಪಿಕೊಂಡಿದೆ. ಈ ಮೂಲಕ 2025 ರ ಏಷ್ಯಾಕಪ್ ಪೈನಲ್ ಹಣಾಹಣಿಯಲ್ಲಿ ಭಾರತ ಪಾಕಿಸ್ತಾನ ಮುಖಾಮುಖಿಯಾಗಲಿದೆ. ಪಾಕಿಸ್ತಾನ ನೀಡಿದ 135 ರನ್ ಗಳಿಗೆ ಪ್ರತಿಯಾಗಿ ಬಾಂಗ್ಲಾದೇಶ ತಂಡ ಬರೀ 124 ರನ್ ಗಳಿಸುವ ಮೂಲಕ ಒಂದು ವಿಕೆಟ್ ಉಳಿಸಿಕೊಂಡು 11 ರನ್ ಅಂತರದಲ್ಲಿ ಸೋಲುಪ್ಪಿಕೊಂಡಿತು. ಈ ಮೂಲಕ ಪಾಕಿಸ್ತಾನ ಸುಲಭವಾಗಿ ಫೈನಲ್ ಗೆ ಲಗ್ಗೆಯಿಟ್ಟಿತು.

Read More

ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳೊಳಗೆ ತೀರ್ಪು ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಗುರುವಾರ ಆದೇಶಿಸಿದೆ. ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ನೇತೃತ್ವದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿ ತಾಜುದ್ದೀನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆ ಪೂರ್ಣಗೊಳ್ಳದೆ 16 ವರ್ಷಗಳಿಂದ ಜೈಲಿನಲ್ಲಿದ್ದಾರೆ ಎಂದು ಹೇಳಿದೆ. 2008 ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ 31 ನೇ ಆರೋಪಿ ಮದನಿ ತಾಜುದ್ದೀನ್ 28 ನೇ ಆರೋಪಿ ಈ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಆಗ್ರಹಾರ ಜೈಲಿನಲ್ಲಿ ಬಂಧನಕ್ಕೆ ಒಳಗಾಗಿರುವ ಮದನಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ

Read More

ಕರಾವಳಿ ಜಿಲ್ಲೆಯ ಕಾಂಗ್ರೆಸ್ ಪ್ರಬಲ ನಾಯಕ ಎಂ.ಎಸ್ ಮಹಮ್ಮದ್ ಅವರಿಗೆ ತಪ್ಪಿದ ಅವಕಾಶ, ಜಿಲ್ಲೆಯಲ್ಲಿ ಭುಗಿಲೆದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ-ಮಂಗಳೂರು:- ಕರ್ನಾಟಕ ಸರಕಾರದ ನಿಗಮ ಮಂಡಳಿಯ ವಿವಿಧ ಅಧ್ಯಕ್ಷರ ಆಯ್ಕೆ ನಡೆದಿದ್ದು ವಿಶೇಷವಾಗಿ ಕರಾವಳಿ ಜಿಲ್ಲೆಗೆ 5 ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ದೊರಕಿದ್ದು ಈ ಮಧ್ಯೆ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ದಿನದ 24 ಗಂಟೆಯು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುವ ಪ್ರಾಮಣಿಕ ಪಕ್ಷ ಸಂಘಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡದಿರುವುದರ ಬಗ್ಗೆ ಕರಾವಳಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಎಂ.ಎಸ್ ಮಹಮ್ಮದ್ ಅವರು ಸಣ್ಣ ವಯಸ್ಸಿನಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿ ದ.ಕ.ಜಿಲ್ಲೆಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದ.ಕ.ಜಿಲ್ಲೆಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸತತ 3 ಭಾರಿ ಜಿಲ್ಲಾ…

Read More

ವಿಟ್ಲ- ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೋಲಿಸರು ಬಂಧಿಸಿರುವ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಸೆ 22 ರಂದು ದೂರುದಾರರು ಮನೆಯಿಂದ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ (42ವ) ಎಂಬಾತ ಲೈಂಗಿಕ ಕಿರುಕುಳ ನೀಡಿರುವ ಕುರಿತು ನೀಡಿರುವ ದೂರಿಗೆ ಸಂಬಂಧಿಸಿದಂತೆ ವಿಟ್ಲ ಪೋಲಿಸ್ ಠಾಣೆಯಲ್ಲಿ ದಿನಾಂಕ 22-09- 2025 ರಂದು ಅಕ್ರ 133/2025 ಕಲಂ 7,8 POSCSO Act 2012 ಮತ್ತು 329( 4) 75 BNS -2023 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ

Read More