ಕುಂಬ್ರ: ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್,ಎಸ್ ಎಸ್ ಎಫ್ ಶಾಖೆಯ ವತಿಯಿಂದ ಮಹ್ಳರತುಲ್ ಬದ್ರಿಯಾ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸ್ಮರಣಿಕೆ ನೀಡುವ ಕಾರ್ಯಕ್ರಮ ಕುಂಬ್ರದ ಕಚೇರಿಯಲ್ಲಿ ನಡೆಯಿತು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಅಧ್ಯಕ್ಷ ಉಸ್ಮಾನ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.ಅಬ್ದುರ್ರಹ್ಮಾನ್ ಝುಹ್ರಿ ಪ್ರಾರ್ಥನೆಗೆ ನೇತೃತ್ವ ನೀಡಿದರು.ಎಸ್ ವೈ ಎಸ್ ಕುಂಬ್ರ ಸರ್ಕಲ್ ಅಧ್ಯಕ್ಷ ಮುಕ್ಕೂರು ಉಸ್ತಾದ್ ಹಿತನುಡಿಗಳನ್ನಾಡಿದರು.ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಾರ್ಡ್ ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.ಕುಂಬ್ರ ಎಸ್ ವೈ ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ, ಇಫ್ತಾರ್ ಕೂಟ,ಅನಾಥ,ನಿರ್ಗತಿಕ ಮಕ್ಕಳ ಮದುವೆಗೆ ಸಹಾಯ,ಮನೆ ಇಲ್ಲದವರಿಗೆ ಮನೆ ಕಟ್ಟಲು ನೆರವು,ರೋಗಿಗಳಿಗೆ ಅವರ ಮನೆಗೆ ಹೋಗಿ ಸಹಾಯ,ಸಾರ್ವಜನಿಕ ಶ್ರಮದಾನ,ಅಶಕ್ತರಿಗೆ ವೀಲ್ ಚೇರ್ ವಿತರಣೆ,ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ರಕ್ತದಾನ ಶಿಬಿರ ಮೊದಲಾದ ಸಾಮಾಜಿಕ ಸೇವೆಗಳ ಮೂಲಕ ಕುಂಬ್ರ ಎಸ್ ವೈ ಎಸ್, ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಎಸ್ ಎಸ್ ಎಫ್ ನಾಡಿಗೆ ಮಾದರಿಯಾಗಿ ಕಾರ್ಯಾಚರಿಸುತ್ತಿವೆ.ಆರಂಭದಲ್ಲಿ ಇಬ್ರಾಹಿಂ ಬಾತಿಷ ಝುಹ್ರಿ ಸ್ವಾಗತಿಸಿದರು.
Subscribe to Updates
Get the latest creative news from FooBar about art, design and business.